Posts

Showing posts from April 27, 2022

ಶಿವಗಿರಿ ಯಾತ್ರೆಯ 90ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ನಾರಾಯಣ ಗುರುಗಳ ಕೊಡುಗೆಗಳ ಸ್ಮರಣೆ.

Image
!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !! ಶಿವಗಿರಿ ಯಾತ್ರೆಯ 90ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ; ನಾರಾಯಣ ಗುರುಗಳ ಕೊಡುಗೆಗಳ ಸ್ಮರಣೆ. ಮಂಗಳೂರು ಲಕ ಸುದ್ದಿ: ಜಾತಿ ತಾರತಮ್ಯ ನೀತಿಗಳ ವಿರುದ್ಧದ ಹೋರಾಡಿದ ಕೇರಳದ ಮಹಾನ್‌ ಸಂತ ಮತ್ತು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಆಯೋಜಿಸಿದ್ದ ಶಿವಗಿರಿ ಯಾತ್ರೆಯ 90 ನೇ ವಾರ್ಷಿಕೋತ್ಸವ ಮತ್ತು ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಾಲ್ಗೊಂಡು ಮಾತನಾಡಿದ ಪ್ರಧಾನಿ, ಮಹಾನ್ ಸಮಾಜ ಸುಧಾರಕ ನಾರಾಯಣ ಗುರುಗಳ ಆಶೀರ್ವಾದ ಮತ್ತು ಮಾರ್ಗದರ್ಶನದಿಂದ ಶಿವಗಿರಿ ತೀರ್ಥಯಾತ್ರೆ ಮತ್ತು ಬ್ರಹ್ಮ ವಿದ್ಯಾಲಯವನ್ನು ಪ್ರಾರಂಭಿಸಲಾಯಿತು. ಸಮಾಜ ಸುಧಾರಕರಾದ ನಾರಾಯಣ ಗುರುಗಳು ಧರ್ಮವನ್ನು ಪರಿಷ್ಕರಿಸಿದರು. ಮತ್ತು ಕಾಲಕ್ಕೆ ತಕ್ಕಂತೆ ಬದಲಾಯಿಸಿದರು. ಮನುಜಕುಲ ಒಂದೇ ಎನ್ನುವ ನಾರಾಯಣ ಗುರುಗಳ ಬೋಧನೆಯ ಸಂದೇಶಗಳನ್ನು ಜನರು ಅನುಸರಿಸಿದರೆ, ಜಗತ್ತಿನ ಯಾವುದೇ ಶಕ್ತಿಯು ನಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದರು. ಗುರುಗಳ ಸಂದೇಶಗಳು ‘ಆತ್ಮ ನಿರ್ಭರ ಭಾರತ’ದ ಕಡೆಗೆ ದಾರಿ ತೋರುತ್ತವೆ ಎಂದು ಪ್ರಧಾನಿ ಮೋದಿ ಹೇಳಿದರು. ಜನರಿಗೆ ಜ್ಞಾನದ ಮಾರ್ಗ ತೋರುತ್ತಿರುವ ಬ್ರಹ್ಮ ವಿದ್ಯಾಲಯವು ಇದೀಗ ಸುವರ್ಣ ಮಹೋತ್ಸವದ ಆಚರಿಸಿಕೊಳ್ಳುತ್ತದೆ. ಈ ಪಯಣ